ಶ್ರೀ ದೇವಸ್ಥಾನದದಲ್ಲಿ ಅಮವಾಸ್ಯೇ ಶತರುದ್ರ ಪಾರಾಯಣ
ದಿನಾಂಕ:29/03/2025 ಶನಿವಾರದಂದು ಶ್ರೀ ಕ್ಷೇತ್ರ ಇಟಗಿಯಲ್ಲಿ ತ್ರಿದೇವತಾ ಪೂಜೆಯಲ್ಲಿ ಒಂದಾದ ಅಮವಾಸ್ಯೆಯ ಶತರುದ್ರ ಪಾರಾಯಣ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ಸಂಪನ್ನಗೊಂಡಿತು.
ಶ್ರೀ ದೇವಸ್ಥಾನದದಲ್ಲಿ ಅಮವಾಸ್ಯೇ ಶತರುದ್ರ ಪಾರಾಯಣ Read More »
ದಿನಾಂಕ:29/03/2025 ಶನಿವಾರದಂದು ಶ್ರೀ ಕ್ಷೇತ್ರ ಇಟಗಿಯಲ್ಲಿ ತ್ರಿದೇವತಾ ಪೂಜೆಯಲ್ಲಿ ಒಂದಾದ ಅಮವಾಸ್ಯೆಯ ಶತರುದ್ರ ಪಾರಾಯಣ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ಸಂಪನ್ನಗೊಂಡಿತು.
ಶ್ರೀ ದೇವಸ್ಥಾನದದಲ್ಲಿ ಅಮವಾಸ್ಯೇ ಶತರುದ್ರ ಪಾರಾಯಣ Read More »
ದಿನಾಂಕ:15/03/2025 ಶನಿವಾರ ಶ್ರೀ ಕ್ಷೇತ್ರ ಇಟಗಿಯಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಶ್ರೀ ರಾಮೇಶ್ವರ ದೇವರ ಅಷ್ಟಬಂಧ ಮಹೋತ್ಸವದ ಪೂರ್ವಭಾವಿ ಸಭೆಯನ್ನು ದೇವಸ್ಥಾನದ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ|ಶಶಿಭೂಷಣ ಹೆಗಡೆ ಅವರು,’ ದಿವ್ಯ ಅಷ್ಟಬಂಧ ಮಹೋತ್ಸವ ಸಮೀಪಿಸುತ್ತಿದೆ.ಅದಕ್ಕೆ ಅವಶ್ಯವಾದ ಆರ್ಥಿಕ ಕ್ರೋಢಿಕರಣಕ್ಕೆ ಕೆಲವೇ ದಿನಗಳು ಮಾತ್ರ ನಮಗೆ ಅವಕಾಶವಿದೆ ಹಾಗಾಗಿ ಈ ವಿಷಯಕ್ಕೆ ಹೆಚ್ವಿನ ಮಹತ್ವ ನೀಡಬೇಕು.ಅಷ್ಟಬಂಧ ಮಹೋತ್ಸವದಲ್ಲಿ ನಮ್ಮ ಕುಲಗುರುಗಳು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಭಾಗಿಯಾಗುವುದು ನಮ್ಮ ಪುಣ್ಯ. ಇಂತಹ
ಇಟಗಿಯ ಅಷ್ಟಬಂಧವನ್ನು ಅಭೂತಪೂರ್ವವಾಗಿ ನಡೆಸಲು ಬಿಳಗಿ ಸೀಮೆ ಸಜ್ಜಾಗಬೇಕು:ಡಾ||ಶಶಿಭೂಷಣ್ ಹೆಗಡೆ Read More »
ಸಿದ್ದಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಇಟಗಿಯಲ್ಲಿವಾರ್ಷಿಕ ಮಹಾರಥೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.ಬೆಳಿಗ್ಗೆ ಮಹಾಬಲಿ, ರಥಾರೋಹಣ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.4000 ಕ್ಕೂ ಅಧಿಕ ಜನರು ಮಹಾ ಅನ್ನಸಂತರ್ಪಣೆಯ ಪ್ರಸಾದ ಭೋಜನ ಸ್ವೀಕರಿಸದರು.ವಿಶೇಷವಾಗಿ ಈ ವರ್ಷ ಮಾಡಿದ ಏಣಿಯ ವ್ಯವಸ್ಥೆಯಿಂದ,ಆಗಮಿಸಿದ ಎಲ್ಲ ಭಕ್ತರೂ ರಥದ ಮೇಲೆ ಕುಳಿತ ಶ್ರೀ ರಾಮೇಶ್ವರನ ದರ್ಶನ ಮಾಡಿಕೊಂಡು ಪ್ರಸಾದ ಸ್ವೀಕರಿಸಿದರು. ರಥೋತ್ಸವದ ಫೋಟೊಗಳನ್ನು ಗೂಗಲ್ ಡ್ರೈವ್ ನಲ್ಲಿ ನೋಡಬಹುದು.->
ಶ್ರೀ ಕ್ಷೇತ್ರ ಇಟಗಿಯಲ್ಲಿ ನಡೆದ ವಾರ್ಷಿಕ ಮಹಾರಥೋತ್ಸವ Read More »
ಬಿಳಗಿ ಸೀಮಾಧ್ಯಕ್ಷನಾಗಿರುವ ಶ್ರೀ ರಾಮೇಶ್ವರನ ಪುಣ್ಯ ಕ್ಷೇತ್ರವಾದ ಇಟಗಿಯಲ್ಲಿ ಮಹಾಶಿವರಾತ್ರಿ ಉತ್ಸವವು ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗಿನಿಂದಲೇ, ಶೃದ್ಧಾ ಭಕ್ತಿ ಪೂರ್ವಕ ಪೂಜಾ ವಿನಿಯೋಗಗಳು ಜರುಗಿದವು. ಸಾಮೂಹಿಕ ಶತರುದ್ರ ಪಾರಾಯಣ,ಪಂಚಾಮೃತ ಅಭಿಷೇಕ, ಭಸ್ಮಾರ್ಚನೆ, ಬಿಲ್ವಾರ್ಚನೆ,ತಿಲಾರ್ಚನೆ ಮಹಾ ಅಭಿಷೇಕ, ಮಹಾಮಂಗಳಾರತಿ,ಸಂಜೆ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡಿತು.,, ಎಲ್ಲ ಭಕ್ತರೂ,,ಮಹಾಶಿವರಾತ್ರಿಯ ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ,ಸೇವಾ ಭಾಜನರಾಗಿ,ಶ್ರೀ ರಾಮೇಶ್ವರನ ಮುಡಿಗಂಧ ಪ್ರಸಾದವನ್ನು ಸ್ವೀಕರಿಸಿ ಪುನೀತರಾದರು.
ಶ್ರೀ ಕ್ಷೇತ್ರ ಇಟಗಿಯಲ್ಲಿ ನಡೆದ ಮಹಾಶಿವರಾತ್ರಿ ಉತ್ಸವ Read More »
ಪುರಾಣ ಪ್ರಸಿದ್ಧ ಕ್ಷೇತ್ರವಾದ ಇಟಗಿ ರಾಮೇಶ್ವರ ದೇವಸ್ಥಾನದ ಅಧೀಕೃತ ಅಂಚೆ ಲಕೋಟೆ ಬಿಡುಗಡೆ ಸಮಾರಂಭ ದಿನಾಂಕ:25/02/2025 ಮಹಾಶಿವರಾತ್ರಿಯಂದು ನಡೆಯಿತು. ಮಹಾ ಶಿವರಾತ್ರಿ ನಿಮಿತ್ತ ಶಿರಸಿ ಅಂಚೆ ವಿಭಾಗವು ಶ್ರೀ ರಾಮೇಶ್ವರ ದೇವಸ್ಥಾನ ಇಟಗಿಯ ಸಹಯೋಗದೊಂದಿಗೆ, ಶ್ರೀ ರಾಮೇಶ್ವರ ದೇವಸ್ಥಾನ ಇಟಗಿಯ ಚಿತ್ರವಿರುವ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದೆ. ಶಿವರಾತ್ರಿಯ ಶುಭ ದಿನದಂದು ಸಾಯಂಕಾಲ 3ಕ್ಕೆ ಇಟಗಿ ಶಾಖಾ ಅಂಚೆ ಕಚೇರಿಯ ಆವರಣದಲ್ಲಿ ಈ ವಿಶೇಷ ಅಂಚೆ ಲಕೋಟೆ ಲೋಕಾರ್ಪಣೆಗೊಂಡಿದೆ.
ಶ್ರೀ ಕ್ಷೇತ್ರ ಇಟಗಿಯ ʼಅಧಿಕೃತ ಅಂಚೆ ಲಕೋಟೆʼ ಬಿಡುಗಡೆ Read More »
ಹಾಸನದ ಶ್ರೀ ಶ್ರೀ ರಾಮಾವದೂತರು ಶ್ರೀ ಕ್ಷೇತ್ರ ಇಟಗಿಗೆ ಆಗಮಿಸಿ ಅನುಗ್ರಹಿಸಿದರು. ಇಟಗಿಯ ಭಕ್ತರು ಶ್ರೀಗಳಿಗೆ ಪಾದಪೂಜೆ ಮತ್ತು ಭಿಕ್ಷಾ ಸೇವೆಯನ್ನು ನೇರವೇರಿಸಿದರು.ನಂತರದಲ್ಲಿ ಆಶೀರ್ವಚನ ನೀಡಿದ ಶ್ರೀಗಳವರು ʼಪ್ರಸಿದ್ಧ ಇಟಗಿ ಕ್ಷೇತ್ರದ ವಾಸ್ತು ಶಿಲ್ಪ ವಿನ್ಯಾಸವನ್ನು ಹೊಗಳಿದರು.ರಾಮೇಶ್ವರನಿಗೆ ಭಕ್ತಿಯಿಂದ ಮಾಡುವ ಎಲ್ಲಾ ಕೆಲಸಕ್ಕೂ ಖಂಡಿತ ಫಲ ಇದ್ದೇ ಇದೆ.ಎಲ್ಲವನ್ನೂ ಕೂಡಲೇ ಅಪೇಕ್ಷಿಸದೇ ಸೇವೆ ಮಾಡುತ್ತಾ ಕಾದರೇ ಖಂಡಿತ ಅವನ ಅನುಗ್ರಹ ಆಗೇ ಆಗುತ್ತದೆʼ ಎಂದರು.ಅವದೂತರ ದರ್ಶನಕ್ಕೆ ಕ್ಷೇತ್ರದ ಭಜಕರು ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದು ಪ್ರಸಾದ ಭೋಜನ
ಶ್ರೀ ಕ್ಷೇತ್ರ ಇಟಗಿಗೆ ಆಗಮಿಸಿದ ಶ್ರೀ ರಾಮಾವದೂತರು Read More »
ಶ್ರೀ ರಾಮೇಶ್ವರ ದೇವರ ಪ್ರೀಯ ಭಕ್ತರೇ,ದಿನಾಂಕ:26-2-2025 ಬುಧವಾರ ” “ಮಹಾಶಿವರಾತ್ರಿ”.ಪುರಾಣ ಪ್ರಸಿದ್ಧಿಯ ಆಗಮೋಕ್ತ ಪುಣ್ಯತಮ ಶ್ರೀ ಕ್ಷೇತ್ರ ಇಟಗಿ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ದಿನಾಂಕ 26/02/2025 ಬುದಹವಾರ ಬೆಳಿಗ್ಗಿನಿಂದಲೇ, ಶೃದ್ಧಾ ಭಕ್ತಿ ಪೂರ್ವಕ ಪೂಜಾ ವಿನಿಯೋಗಗಳು ಜರುಗಲಿವೆ. ಸಾಮೂಹಿಕ ಶತರುದ್ರ ಪಾರಾಯಣ,ಪಂಚಾಮೃತ ಅಭಿಷೇಕ, ಭಸ್ಮಾರ್ಚನೆ, ಬಿಲ್ವಾರ್ಚನೆ,ತಿಲಾರ್ಚನೆ ಮಹಾ ಅಭಿಷೇಕ, ಮಹಾಮಂಗಳಾರತಿ,ಸಂಜೆ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಏರ್ಪಾಡಾಗಿದೆ,, ನಾವೆಲ್ಲಾ ಭಕ್ತರೂ,,ಮಹಾಶಿವರಾತ್ರಿಯ ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ,ಸೇವಾ ಭಾಜನರಾಗಿ,ಶ್ರೀ ರಾಮೇಶ್ವರನ ಮುಡಿಗಂಧ ಪ್ರಸಾದವನ್ನು ಸ್ವೀಕರಿಸಿ ಪುನೀತರಾಗೋಣ.🔱🚩ಹರ ಹರ ಮಹಾದೇವ🚩🔱 ಸೂಚನೆ:
ಇತಗಿಯಲ್ಲಿ ಮಹಾಶಿವರಾತ್ರಿ ಉತ್ಸವ Read More »